ಸುಳ್ಯದಲ್ಲಿ ಇದೀಗ ಕಾಂಗ್ರೆಸ್ ಉಚ್ಛಾಟಿತ ನಾಯಕರುಗಳ ಸಭೆ ಕಾಂಗ್ರೆಸ್ ಮುಖಂಡ ಮಹೇಶ್ ಕರಿಕಳ ಅವರ ಮನೆಯಲ್ಲಿ ನಡೆದಿದೆ. ಎಲ್ಲಾ ನಾಯಕರು ಒಟ್ಟಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನೈಜ ವಿಚಾರ ಮನವರಿಕೆ ಮಾಡಲು ನಿರ್ಧರಿಸಲಾಗಿದೆ.
ಈ ಸಂದರ್ಭ ಹಲವು ಅಭಿಪ್ರಾಯಗಳನ್ನು ನಾಯಕರು ವ್ಯಕ್ತಪಡಿಸಿದರು. ಪಕ್ಷ ವಿರೋಧಿ ಚಟುವಟಿಕೆ ಈ ಹಿಂದಿನ ಎಲ್ಲಾ ಚುನಾವಣೆಯ ಸಂದರ್ಭವೂ ಆಗಿದೆ. ಈ ಹಿಂದೆ ಡಾ.ರಘು ಅವರು ಗೆಲ್ಲುವ ಸಂದರ್ಭ ನಡೆದ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಯಾವ ಕ್ರಮವಾಗಿದೆ? ಎಂಬ ಪ್ರಶ್ನೆಯೂ ವ್ಯಕ್ತವಾಯಿತು.
ಈ ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆದಿರಲಿಲ್ಲ, ಬದಲಾಗಿ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತ ಆಯ್ಕೆ ಇದ್ದಿರುವ ಅಭ್ಯರ್ಥಿಯ ಆಯ್ಕೆ ನಡೆಯಬೇಕಿತ್ತು ಎನ್ನುವುದೇ ಬೇಡಿಕೆಯಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಅಭಿಯಾನ ನಡೆಸಬೇಕು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯೂ ಆಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.
ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಸಹಿತ ಪ್ರಮುಖರು ಇದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…