ಸುಳ್ಯದಲ್ಲಿ ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ಯತ್ನ ? | ಒಂದಾಗಿ ಸ್ಫರ್ಧೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ | ಸುಳ್ಯದಲ್ಲಿ ಸಭೆ ನಡೆಸಲು ಡಿಕೆಶಿ ಸೂಚನೆ ? |

April 14, 2023
10:17 PM

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಂದಕುಮಾರ್‌ ಇಬ್ಬರನ್ನೂ ಬೆಂಗಳೂರಿನಲ್ಲಿ  ಮಾತುಕತೆ ನಡೆಸಿದ ಕಾಂಗ್ರೆಸ್‌ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್‌ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು  ಕುತೂಹಲ ಮೂಡಿದೆ.

ನಂದಕುಮಾರ್
ಜಿ ಕೃಷ್ಣಪ್ಪ

ಈಗಾಗಲೇ ನಂದಕುಮಾರ್‌ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು  ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್‌ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್‌ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು  ಈಗಿನ ಕುತೂಹಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror