ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಇಬ್ಬರನ್ನೂ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ ಕಾಂಗ್ರೆಸ್ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಕುತೂಹಲ ಮೂಡಿದೆ.
ಈಗಾಗಲೇ ನಂದಕುಮಾರ್ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು ಈಗಿನ ಕುತೂಹಲ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…