ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಇಬ್ಬರನ್ನೂ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ ಕಾಂಗ್ರೆಸ್ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಕುತೂಹಲ ಮೂಡಿದೆ.
ಈಗಾಗಲೇ ನಂದಕುಮಾರ್ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು ಈಗಿನ ಕುತೂಹಲ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…