ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಇಬ್ಬರನ್ನೂ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ ಕಾಂಗ್ರೆಸ್ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಕುತೂಹಲ ಮೂಡಿದೆ.
ಈಗಾಗಲೇ ನಂದಕುಮಾರ್ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು ಈಗಿನ ಕುತೂಹಲ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…