Advertisement
ಸುದ್ದಿಗಳು

ಸುಳ್ಯದಲ್ಲಿ ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ಯತ್ನ ? | ಒಂದಾಗಿ ಸ್ಫರ್ಧೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ | ಸುಳ್ಯದಲ್ಲಿ ಸಭೆ ನಡೆಸಲು ಡಿಕೆಶಿ ಸೂಚನೆ ? |

Share

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್‌ ಭಿನ್ನಮತ ಶಮನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಂದಕುಮಾರ್‌ ಇಬ್ಬರನ್ನೂ ಬೆಂಗಳೂರಿನಲ್ಲಿ  ಮಾತುಕತೆ ನಡೆಸಿದ ಕಾಂಗ್ರೆಸ್‌ ಮುಖಂಡರು , ಭಿನ್ನಾಭಿಪ್ರಾಯ ಮರೆತು ಒಂದಾಗಿ ಸ್ಫರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸದ್ಯ ಬಿ ಫಾರಂ ಯಾರಿಗೂ ನೀಡದೆ, ಒಂದಾಗಿ ಸ್ಫರ್ಧೆಗೆ ಇಳಿಯುವಂತೆ ತಿಳಿಸಿದೆ. ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಹಾಗೂ ರಮಾನಾಥ ರೈ ಅವರಿಗೆ ಭಿನ್ನಮತ ಶಮನಕ್ಕೆ ಸಭೆ ನಡೆಸಿ ವರದಿ ನೀಡುವಂತೆ ಕಾಂಗ್ರೆಸ್‌ ರಾಜ್ಯ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಇದೀಗ ಮತ್ತೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು  ಕುತೂಹಲ ಮೂಡಿದೆ.

ನಂದಕುಮಾರ್
ಜಿ ಕೃಷ್ಣಪ್ಪ

ಈಗಾಗಲೇ ನಂದಕುಮಾರ್‌ ಪಕ್ಷೇತರವಾಗಿ ಸ್ಫರ್ಧೆಗೆ ನಿರ್ಧರಿಸಿದ್ದರು. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಮುಖರನ್ನು  ಭೇಟಿ ಮಾಡಿದ್ದರು. ಇದೀಗ ಒಂದಾಗಿ ಚುನಾವಣೆಗೆ ಸ್ಫರ್ಧಿಸಲು ಹೈಕಮಾಂಡ್‌ ಸೂಚಿಸಿದ ಹಿನ್ನೆಲೆಯಲ್ಲಿ ಕುತೂಹಲ ಮೂಡಿದೆ. ಈ ಬಾರಿ ಸುಳ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡುಬಂದಿತ್ತು. ಈ ಲಾಭವನ್ನು ಪಡೆಯಲು ಕಾಂಗ್ರೆಸ್‌ ಶಕ್ತವಾಗುತ್ತಾ, ವಿಫಲವಾಗುತ್ತಾ ಎನ್ನುವುದು  ಈಗಿನ ಕುತೂಹಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

24 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

32 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

47 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago