Advertisement
ಸುದ್ದಿಗಳು

ಚುನಾವಣಾ ಕಣ | Sullia | ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ | ಏನಾದೀತು ಸುಳ್ಯದಲ್ಲಿ | ಇದುವರೆಗಿನ Updates … |

Share

ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಬಾರಿ ಕುತೂಹಲದ ಕ್ಷೇತ್ರಗಳಲ್ಲಿ  ಒಂದು. 30 ವರ್ಷಗಳಿಂದ ಶಾಸಕರಾಗಿ, ಕಳೆದ ಬಾರಿ ಸಚಿವರಾಗಿದ್ದ ಅಂಗಾರ ಅವರ ಬದಲಾವಣೆ ಬಳಿಕದ ಕ್ಷೇತ್ರ. ಕಳೆದ ಕೆಲವು ಸಮಯಗಳಿಂದ ಜನರಿಂದ ಮತದಾನ ಬಹಿಷ್ಕಾರ ಕೇಳಿರುವ ಕ್ಷೇತ್ರ. ಕಾಂಗ್ರೆಸ್‌ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಹಠ ಹಿಡಿದಿರುವ ಕ್ಷೇತ್ರ. ಮೊದಲ ಬಾರಿಗೆ ಆಮ್‌ ಆದ್ಮಿ ಪಕ್ಷವು ಪೈಪೋಟಿಗೆ ಇಳಿದಿರುವ ಕ್ಷೇತ್ರ… ಹೀಗೇ ಈ ಎಲ್ಲಾ ಬೆಳವಣಿಗೆಗಳ ಕಾರಣದಿಂದ ಸುಳ್ಯ ಈ ಬಾರಿ ಕುತೂಹಲ ಮೂಡಿಸಿದೆ. ಇದುವರೆಗಿನ ಬೆಳವಣಿಗೆ ಹೇಗಿದೆ , ಹಾಗಿದ್ದರೆ?

ಸುಳ್ಯದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಗೆಲುವು ಸಾಧಿಸುತ್ತಿದೆ. ಕಳೆದ 5 ವರ್ಷಗಳಿಂದ ಇಲ್ಲಿ ಅಭಿವೃದ್ಧಿಯ ಬಗ್ಗೆ ಚರ್ಚೆ ಆರಂಭವಾಯಿತು. ಈಚೆಗೆ ಎರಡು ವರ್ಷಗಳಿಂದ ಅಭಿವೃದ್ಧಿಯ ಬಗ್ಗೆಯೇ ಹೋರಾಟ ನಡೆಯಿತು. ಅಭಿವೃದ್ಧಿ ಆಗದೇ ಇರಲು ಶಾಸಕರೇ ಕಾರಣ ಎಂದೂ ವಿರೋಧ ಆರಂಭವಾಯಿತು, ಈಚೆಗೆ ಸುಮಾರು 18 ಕಡೆಗಳಲ್ಲಿ ಮತದಾನ ಬಹಿಷ್ಕಾರ ಸೇರಿದಂತೆ ಪ್ರತಿಭಟನೆಗಳು ಕಂಡುಬಂದವು. ಕೊನೆಗೆ ಅಭ್ಯರ್ಥಿ ಬದಲಾವಣೆ ನಡೆಯಿತು. ಅದಾದ ಬಳಿಕ ಇನ್ನೊಂದು ಬೆಳವಣಿಗೆ ನಡೆಯಿತು. ಅಂಗಾರ ಅವರೇ ಅಸಮಾಧಾನ ಹೊರಹಾಕಿ, ಆ ಬಳಿಕ ಮತ್ತೆ ಸಕ್ರಿಯವಾಗುತ್ತೇನೆ ಎನ್ನುವ ಮೂಲಕ ಪ್ರಕರಣ ತಣ್ಣಗಾದರೂ, ಒಳಗಿನ ಲೆಕ್ಕಾಚಾರಗಳು ಬೇರೆಯೇ ನಡೆಯುತ್ತಿದೆ. ಈಗಾಗಲೇ ಸಮುದಾಯದ ಆಧಾರದಲ್ಲಿ ಚರ್ಚೆ ನಡೆಯಲು ಆರಂಭವಾಗಿದೆ. ಪಕ್ಷೇತರವಾಗಿಯೂ ಅಭ್ಯರ್ಥಿಗಳು ಕಣಕ್ಕೆ ಇಳಿಯುವ ಸೂಚನೆ ಲಭ್ಯವಾಗಿದೆ.

ಕ್ಷೇತ್ರದಲ್ಲಿ ಹಾಲಿ ಶಾಸಕರ ವಿರುದ್ಧವಾಗಿ ಬಲವಾದ ವಿರೋಧ ಕಂಡುಬಂದರೂ ಕಾಂಗ್ರೆಸ್‌ ಮತ ಸೆಳೆಯುವಲ್ಲಿ, ಜನರ ಪರವಾಗಿ ಧ್ವನಿ ಎತ್ತುವಲ್ಲಿ ವಿಫಲವಾಗಿತ್ತು. ಹಾಗಿದ್ದರೂ ಈ ಬಾರಿ ಕಾಂಗ್ರೆಸ್‌ ಪರವಾದ ಒಲವು ಹಲವು ಕಡೆ ಇತ್ತು. ಆದರೆ  ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯವು ಈ ಅವಕಾಶ ಪಡೆಯುವಲ್ಲಿ ಹಿನ್ನಡೆ ಅನುಭವಿಸಿದೆ. ಈಗ ಒಂದಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದರೂ ಒಳಗಿನ ಬೇಗುದಿ ಕಂಡುಬರುತ್ತಿದೆ. ಹೀಗಾಗಿ ಈಗ ಕಾಂಗ್ರೆಸ್‌ ವ್ಯವಸ್ಥಿತ ರೀತಿಯಲ್ಲಿ ಒಂದಾಗಿ ಪ್ರಚಾರ ಕಾರ್ಯ ನಡೆಸಿದರೆ ಈ ಬಾರಿ ಸುಳ್ಯದಲ್ಲಿ ಬದಲಾವಣೆಯ ವಾತಾವರಣ ಇದೆ.

ಇನ್ನು ಆಮ್‌ ಆದ್ಮಿ ಪಕ್ಷವು ಹೊಸ ರಾಜಕೀಯ ಅಲೆಯನ್ನು ಸೃಷ್ಟಿ ಮಾಡುತ್ತಿದೆ. ತನ್ನದೇ ಆದ ಮತದಾರರನ್ನು ಹೊಂದಿದೆ. ಎರಡೂ ಪಕ್ಷಗಳಿಂದ ಬೇಸತ್ತ ಮತದಾರರು ಎಎಪಿಯ ಕಡೆಗೆ ಒಲವು ಹೊಂದಿದ್ದಾರೆ. ಈ ಮತಗಳೂ ಎಎಪಿ ಬೆಳವಣಿಗೆಗೆ ಕಾರಣವಾಗಲಿದೆ. ಮೊದಲ ಚುನಾವಣೆಯಲ್ಲಿಯೇ ಉತ್ತಮ ಸ್ಪಂದನೆಯನ್ನು ಎಎಪಿ ಹೊಂದಿದೆ.

ಜೆಡಿಎಸ್‌ , ಪ್ರಜಾಕೀಯ ಪಕ್ಷಗಳು ಕೂಡಾ ಸುಳ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಯುವ ಸೂಚನೆ ಇದೆ. ಸೋಮವಾರದಿಂದ ಚುನಾವಣಾ ಕಣದಲ್ಲಿನ ಸ್ಪಷ್ಟ ಚಿತ್ರಣಗಳು ಗೋಚರವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago