Advertisement
ಸುದ್ದಿಗಳು

ಚುನಾವಣಾ ಕಣ | Sullia | ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ | ಏನಾದೀತು ಸುಳ್ಯದಲ್ಲಿ | ಇದುವರೆಗಿನ Updates … |

Share

ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಬಾರಿ ಕುತೂಹಲದ ಕ್ಷೇತ್ರಗಳಲ್ಲಿ  ಒಂದು. 30 ವರ್ಷಗಳಿಂದ ಶಾಸಕರಾಗಿ, ಕಳೆದ ಬಾರಿ ಸಚಿವರಾಗಿದ್ದ ಅಂಗಾರ ಅವರ ಬದಲಾವಣೆ ಬಳಿಕದ ಕ್ಷೇತ್ರ. ಕಳೆದ ಕೆಲವು ಸಮಯಗಳಿಂದ ಜನರಿಂದ ಮತದಾನ ಬಹಿಷ್ಕಾರ ಕೇಳಿರುವ ಕ್ಷೇತ್ರ. ಕಾಂಗ್ರೆಸ್‌ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಹಠ ಹಿಡಿದಿರುವ ಕ್ಷೇತ್ರ. ಮೊದಲ ಬಾರಿಗೆ ಆಮ್‌ ಆದ್ಮಿ ಪಕ್ಷವು ಪೈಪೋಟಿಗೆ ಇಳಿದಿರುವ ಕ್ಷೇತ್ರ… ಹೀಗೇ ಈ ಎಲ್ಲಾ ಬೆಳವಣಿಗೆಗಳ ಕಾರಣದಿಂದ ಸುಳ್ಯ ಈ ಬಾರಿ ಕುತೂಹಲ ಮೂಡಿಸಿದೆ. ಇದುವರೆಗಿನ ಬೆಳವಣಿಗೆ ಹೇಗಿದೆ , ಹಾಗಿದ್ದರೆ?

ಸುಳ್ಯದಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಗೆಲುವು ಸಾಧಿಸುತ್ತಿದೆ. ಕಳೆದ 5 ವರ್ಷಗಳಿಂದ ಇಲ್ಲಿ ಅಭಿವೃದ್ಧಿಯ ಬಗ್ಗೆ ಚರ್ಚೆ ಆರಂಭವಾಯಿತು. ಈಚೆಗೆ ಎರಡು ವರ್ಷಗಳಿಂದ ಅಭಿವೃದ್ಧಿಯ ಬಗ್ಗೆಯೇ ಹೋರಾಟ ನಡೆಯಿತು. ಅಭಿವೃದ್ಧಿ ಆಗದೇ ಇರಲು ಶಾಸಕರೇ ಕಾರಣ ಎಂದೂ ವಿರೋಧ ಆರಂಭವಾಯಿತು, ಈಚೆಗೆ ಸುಮಾರು 18 ಕಡೆಗಳಲ್ಲಿ ಮತದಾನ ಬಹಿಷ್ಕಾರ ಸೇರಿದಂತೆ ಪ್ರತಿಭಟನೆಗಳು ಕಂಡುಬಂದವು. ಕೊನೆಗೆ ಅಭ್ಯರ್ಥಿ ಬದಲಾವಣೆ ನಡೆಯಿತು. ಅದಾದ ಬಳಿಕ ಇನ್ನೊಂದು ಬೆಳವಣಿಗೆ ನಡೆಯಿತು. ಅಂಗಾರ ಅವರೇ ಅಸಮಾಧಾನ ಹೊರಹಾಕಿ, ಆ ಬಳಿಕ ಮತ್ತೆ ಸಕ್ರಿಯವಾಗುತ್ತೇನೆ ಎನ್ನುವ ಮೂಲಕ ಪ್ರಕರಣ ತಣ್ಣಗಾದರೂ, ಒಳಗಿನ ಲೆಕ್ಕಾಚಾರಗಳು ಬೇರೆಯೇ ನಡೆಯುತ್ತಿದೆ. ಈಗಾಗಲೇ ಸಮುದಾಯದ ಆಧಾರದಲ್ಲಿ ಚರ್ಚೆ ನಡೆಯಲು ಆರಂಭವಾಗಿದೆ. ಪಕ್ಷೇತರವಾಗಿಯೂ ಅಭ್ಯರ್ಥಿಗಳು ಕಣಕ್ಕೆ ಇಳಿಯುವ ಸೂಚನೆ ಲಭ್ಯವಾಗಿದೆ.

ಕ್ಷೇತ್ರದಲ್ಲಿ ಹಾಲಿ ಶಾಸಕರ ವಿರುದ್ಧವಾಗಿ ಬಲವಾದ ವಿರೋಧ ಕಂಡುಬಂದರೂ ಕಾಂಗ್ರೆಸ್‌ ಮತ ಸೆಳೆಯುವಲ್ಲಿ, ಜನರ ಪರವಾಗಿ ಧ್ವನಿ ಎತ್ತುವಲ್ಲಿ ವಿಫಲವಾಗಿತ್ತು. ಹಾಗಿದ್ದರೂ ಈ ಬಾರಿ ಕಾಂಗ್ರೆಸ್‌ ಪರವಾದ ಒಲವು ಹಲವು ಕಡೆ ಇತ್ತು. ಆದರೆ  ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯವು ಈ ಅವಕಾಶ ಪಡೆಯುವಲ್ಲಿ ಹಿನ್ನಡೆ ಅನುಭವಿಸಿದೆ. ಈಗ ಒಂದಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದರೂ ಒಳಗಿನ ಬೇಗುದಿ ಕಂಡುಬರುತ್ತಿದೆ. ಹೀಗಾಗಿ ಈಗ ಕಾಂಗ್ರೆಸ್‌ ವ್ಯವಸ್ಥಿತ ರೀತಿಯಲ್ಲಿ ಒಂದಾಗಿ ಪ್ರಚಾರ ಕಾರ್ಯ ನಡೆಸಿದರೆ ಈ ಬಾರಿ ಸುಳ್ಯದಲ್ಲಿ ಬದಲಾವಣೆಯ ವಾತಾವರಣ ಇದೆ.

ಇನ್ನು ಆಮ್‌ ಆದ್ಮಿ ಪಕ್ಷವು ಹೊಸ ರಾಜಕೀಯ ಅಲೆಯನ್ನು ಸೃಷ್ಟಿ ಮಾಡುತ್ತಿದೆ. ತನ್ನದೇ ಆದ ಮತದಾರರನ್ನು ಹೊಂದಿದೆ. ಎರಡೂ ಪಕ್ಷಗಳಿಂದ ಬೇಸತ್ತ ಮತದಾರರು ಎಎಪಿಯ ಕಡೆಗೆ ಒಲವು ಹೊಂದಿದ್ದಾರೆ. ಈ ಮತಗಳೂ ಎಎಪಿ ಬೆಳವಣಿಗೆಗೆ ಕಾರಣವಾಗಲಿದೆ. ಮೊದಲ ಚುನಾವಣೆಯಲ್ಲಿಯೇ ಉತ್ತಮ ಸ್ಪಂದನೆಯನ್ನು ಎಎಪಿ ಹೊಂದಿದೆ.

ಜೆಡಿಎಸ್‌ , ಪ್ರಜಾಕೀಯ ಪಕ್ಷಗಳು ಕೂಡಾ ಸುಳ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಯುವ ಸೂಚನೆ ಇದೆ. ಸೋಮವಾರದಿಂದ ಚುನಾವಣಾ ಕಣದಲ್ಲಿನ ಸ್ಪಷ್ಟ ಚಿತ್ರಣಗಳು ಗೋಚರವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

6 minutes ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

4 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

4 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

15 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

15 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

20 hours ago