Advertisement
ಸುದ್ದಿಗಳು

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ

Share

ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.

ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು  ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.

ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago