ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.
ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.
ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…