ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.
ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.
ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…