Advertisement
ಸುದ್ದಿಗಳು

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ

Share

ಸುಳ್ಯದ ಎಲಿಮಲೆ ಇಕ್ರಾಮುಸ್ಸುನ್ನ ಸನದುದಾನ ಮಹಾಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭವು ನಾಳೆ ಜನವರಿ 29 ಮತ್ತು 30 ರಂದು ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.

ಸೈಯಿದ್ ಮುಹ್ಸಿನ್ ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್ ಮುದರ್ರಿಸ್ ಎಲಿಮಲೆ ಯವರ ನೇತೃತ್ವದಲ್ಲಿ ನಡೆಸುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಇದರ ಎರಡನೇ ಸನದುದಾನ ಮಹಾಸಮ್ಮೇಳನ ಹಾಗೂ ಎಲಿಮಲೆ ಯುವಕರ ಸಂಘಟನೆಯಾದ ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ ಇದರ 42 ನೇ ವಾರ್ಷಿಕ ಸಮಾರಂಭ ಕಾರ್ಯಕ್ರಮವು  ಗುರುವಾರ ಮತ್ತು ಶುಕ್ರವಾರ ಇಕ್ರಾಮುಸ್ಸುನ್ನ ಕ್ಯಾಂಪಸ್ ಎಲಿಮಲೆಯಲ್ಲಿ ಜರುಗಲಿದೆ.

ಜನವರಿ 29 ಗುರುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ಮಹಿಳೆಯರಿಗಾಗಿ ವಿಶೇಷ ತರಬೇತಿ ಶಿಬಿರ, ಎಲಿಮಲೆ ತಂಗಳ್ ರವರ ಪಿತಾಮಹರ ಆಂಡ್ ನೇರ್ಚೆ, ಬೃಹತ್ ಬುರ್ಧಾ ಮಜ್ಲಿಸ್, ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ, ಜಿಸಿಸಿ ಎಲಿಮಲೆ ಗಲ್ಫ್ ಮೀಟ್, ಹಳೆ ವಿಧ್ಯಾರ್ಥಿಗಳ ಅಲುಮ್ನಿ ಮೀಟ್ ಧಾರ್ಮಿಕ ಉಪನ್ಯಾಸ ಮುಂತಾದ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬಹು: ನೂರುಸ್ಸಾದಾತ್ ಬಾಯಾರ್ ತಂಙಳ್, ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ, ಸೈದಲವಿಕೋಯ ಅಲ್ ಬಖಾರಿ ಕುಂಜಿಲಂ ತಂಙಳ್, ಮಾಣಿ ಉಸ್ತಾದ್, ಕರ್ನಾಟಕ ವಿಧಾನಸಬಾಧ್ಯಕ್ಷರಾದ ಜನಾಬ್ ಯುಟಿ ಖಾದರ್ ಫರೀದ್, ಟಿಎಂ ಶಹೀದ್, ಪ್ರಖ್ಯಾತ ಬುರ್ದಾ ಗಾಯಕರಾದ ಕಾಸಿಮ್ ಕಾಮಿಲ್ ಸಖಾಫಿ, ಸಮದ್ ಸಖಾಫಿ, ಅಝರ್ ಕಲ್ಲೂರು, ಆಸಿಫ್, ಮಿಕ್ದಾದ್ ಹಾಗೂ ಕರ್ನಾಟಕದ ಪ್ರಖ್ಯಾತ ನಅತ್ ಗಾಯಕರಾದ ನಬೀಲ್ ಬರಕಾತಿ ಬೆಂಗಳೂರು ಹಾಗೂ ಸಾಮಾಜಿಕ ರಾಜಕೀಯ ಧಾರ್ಮಿಕ ನೇತಾರರು ಭಾಗವಹಸದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

11 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago