ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ. ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…