ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ. ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…