ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ. ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…