MIRROR FOCUS

ರಾಜ್ಯದ ಗಮನ ಸೆಳೆದ ನ್ಯಾಯಾಧೀಶರ ಗ್ರಾಮೀಣ ಅಭಿವೃದ್ಧಿ ಕಳಕಳಿ | ಪುಟಾಣಿಗಳ ರಸ್ತೆ ದುರಸ್ತಿ ಮೂಡಿಸಿದ ಸಂಚಲನ…!

Share

ಸುಳ್ಯ ಹಲವು ಸಮಯಗಳಿಂದ ದೇಶಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದು ಮೂಲಭೂತ ಸೌಲಭ್ಯದ ಕೊರತೆಯ ಕಾರಣದಿಂದಲೇ..!. ಈ ಬಾರಿ ಮಾತ್ರಾ ಸುಳ್ಯದ ನ್ಯಾಯಾಧೀಶರ ಗ್ರಾಮೀಣ ಭಾಗದ ಅಭಿವೃದ್ಧಿಯ ಕಾಳಜಿಯಿಂದ ಮತ್ತೆ ಸುದ್ದಿಯಾಗಿದೆ. ಬೆಳ್ಳಾರೆಯಲ್ಲಿ ಪುಟಾಣಿಗಳು ರಸ್ತೆ ದುರಸ್ತಿ ಮಾಡುವ ಮೂಲಕ ಇಡೀ ನಾಡಿನ ಗಮನ ಸೆಳೆದಿದ್ದರು, ಇದನ್ನು ಗಮನಿಸಿ ಸುಳ್ಯದ ನ್ಯಾಯಾಧೀಶರೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಇಲ್ಲಿ ಗ್ರಾಮೀಣ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement

ಬೆಳ್ಳಾರೆ ಗ್ರಾಮದ ಮೂಡಾಯಿತೋಟ ಹಾಗೂ ಬೆಳ್ಳಾರೆ ಸಂಪರ್ಕದ ರಸ್ತೆ ಅವ್ಯವಸ್ಥೆಯಿಂದ ಕೂಡಿತ್ತು. ಸಂಪೂರ್ಣ ಕೆಸರಾಗಿತ್ತು. ಈ ರಸ್ತೆಯನ್ನು ಇಬ್ಬರು ಪುಟಾಣಿಗಳು ದುರಸ್ತಿ ಮಾಡಿದ್ದರು. ಹೆತ್ತವರ ಜೊತೆಗೆ ತಾವೂ ಹಾರೆ ಹಿಡಿದು ಕೆಲಸ ಮಾಡಿದ್ದರು. ಪುಟಾಣಿಗಳು ರಸ್ತೆ ದುರಸ್ತಿ ಮಾಡುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಸುಳ್ಯದ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್‌ ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.ಪುಟಾಣಿಗಳು ಹಾರೆ ಹಿಡಿದು ಕೆಲಸ ಮಾಡುವ ಸ್ಥಿತಿಯ ಬಗ್ಗೆ ವಿವರಣೆ ಕೇಳಿದ್ದು ಮಾತ್ರವಲ್ಲದೆ, ಕೇಸು ದಾಖಲಿಸಿಕೊಳ್ಳಲೂ ಸೂಚನೆ ನೀಡಿದ್ದರು.

ಆದರೆ ರಸ್ತೆ ದುರಸ್ತಿ ಮಾಡಿಸುವ ಪಂಚಾಯತ್‌ ಭರವಸೆಯ ಮೇರೆಗೆ ತಕ್ಷಣವೇ ರಸ್ತೆ ದುರಸ್ತಿ ಮಾಡಲು ನ್ಯಾಯಾಧೀಶರು ಸೂಚನೆ ನೀಡಿದ್ದರು. ಈ ಘಟನೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.  ಸುಳ್ಯದ ನ್ಯಾಯಾಧೀಶರ ಗ್ರಾಮೀಣ ಭಾಗದ ಕಳಕಳಿ ಈಗ ಎಲ್ಲೆಡೆಯೂ ಗಮನ ಸೆಳೆದಿದೆ. ಗ್ರಾಮೀಣ ಭಾಗದ ಹಾಗೂ ಪುಟಾಣಿಗಳ ಸಂಕಷ್ಟವನ್ನು ಖುದ್ದಾಗಿ ವೀಕ್ಷಣೆ ಮಾಡಿರುವ ನ್ಯಾಯಾಧೀಶರು ತಕ್ಷಣವೇ ದುರಸ್ತಿಗೆ ಸೂಚನೆ ನೀಡಿರುವುದು  ಗ್ರಾಮೀಣ ಭಾಗದ ಜನರಲ್ಲಿ ಅಭಿವೃದ್ಧಿಯ ಭರವಸೆಗೆ ಕಾರಣವಾಗಿದೆ.

Advertisement

ಸುಳ್ಯವು ಕಳೆದ ಕೆಲವು ಸಮಯಗಳಿಂದ ಸುದ್ದಿಯಾಗುತ್ತಿದೆ. ಸುಳ್ಯದ ಮೂಲಭೂತ ಸೌಲಭ್ಯದ ಕೊರತೆಯೇ ಸುದ್ದಿಯಾಗಲು ಪ್ರಮುಖ ಕಾರಣ. ಸುಳ್ಯದ ಗುತ್ತಿಗಾರಿನ  ಮೊಗ್ರದಲ್ಲಿ ಗ್ರಾಮಸ್ಥರಿಂದ ಹಾಗೂ ದಾನಿಗಳ ನೆರವಿನಿಂದ ಸೇತುವೆ ನಿರ್ಮಾಣ, ಮೊಬೈಲ್‌ ನೆಟ್ವರ್ಕ್‌ ಸಮಸ್ಯೆ, ಗ್ರಾಮೀಣ ಭಾಗದ ಸಂಪರ್ಕ ರಸ್ತೆ ಸಮಸ್ಯೆ, ಸೇತುವೆ ಸಮಸ್ಯೆ, ಕಾಡುಪ್ರಾಣಿಗಳ ಹಾವಳಿ, ಆನೆ ಹಾವಳಿ,  ಕೃಷಿ ಸಮಸ್ಯೆ ಇಂತಹ ಮೂಲಭೂತ ಸಮಸ್ಯೆಗಳ ಕಾರಣದಿಂದಲೇ ರಾಜ್ಯ ಮಾತ್ರವಲ್ಲ ದೇಶಮಟ್ಟದಲ್ಲೂ ಸುದ್ದಿಯಾಗುತ್ತಿದೆ. ಈ ಬಾರಿ ಮತ್ತೆ ಸುದ್ದಿಯಾದ್ದು ಬೆಳ್ಳಾರೆಯ ಪುಟಾಣಿಗಳ ಮೂಲಕ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

16 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

16 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

17 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

17 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

17 hours ago