ಹಲವು ಕಡೆ ಕಾಡಾನೆಗಳ ಹಾವಳಿ | ಸುಳ್ಯ ಶಾಸಕರಿಂದ ಸಚಿವರ ಭೇಟಿ | ಸೋಲಾರ್‌ ಬೇಲಿ ಅಳವಡಿಕೆಗೆ ಮನವಿ |

October 7, 2023
9:40 AM
ಕಾಡಾನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಒತ್ತಾಯಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಐತೂರು, ಕೊಣಾಜೆ, ಕೊಂಬಾರು ಮತ್ತು ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ  ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದು ಅಪಾರ ಕೃಷಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಬೆಂಗಳೂರು ವಿಕಾಸ ಸೌಧ ಕಚೇರಿಯಲ್ಲಿ ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

Advertisement
Advertisement

ಕಳೆದ ಹಲವು ಸಮಯಗಳಿಂ ಕಾಡಾನೆಗಳ ಹಾವಳಿಯಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೃಷಿ ನಷ್ಟ, ಜೀವ ಹಾನಿ, ಜೀವ ಭಯ ಸೇರಿದಂತೆ ಆತಂಕದಿಂದ ಬದುಕಬೇಕಾಗಿದೆ. ಹೀಗಾಗಿ  ಆನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕಾಗಿ ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಶಾಸಕರು ಒತ್ತಾಯಿಸಿದ್ದಾರೆ.

ಸುಳ್ಯ ಮಾತ್ರವಲ್ಲ ಮಡಿಕೇರಿ ಜಿಲ್ಲೆಯ ಹಲವು ಕಡೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದೆ, ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಕರಿಕೆ ಪ್ರದೇಶದಲ್ಲೂ ಕಾಡಾನೆ ಹಾವಳಿಯಿಂದ ಕೃಷಿಕರು ನಷ್ಟ ಅನುಭವಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ
ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |
June 21, 2025
10:18 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group