ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಐತೂರು, ಕೊಣಾಜೆ, ಕೊಂಬಾರು ಮತ್ತು ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದು ಅಪಾರ ಕೃಷಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಬೆಂಗಳೂರು ವಿಕಾಸ ಸೌಧ ಕಚೇರಿಯಲ್ಲಿ ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಕಳೆದ ಹಲವು ಸಮಯಗಳಿಂ ಕಾಡಾನೆಗಳ ಹಾವಳಿಯಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೃಷಿ ನಷ್ಟ, ಜೀವ ಹಾನಿ, ಜೀವ ಭಯ ಸೇರಿದಂತೆ ಆತಂಕದಿಂದ ಬದುಕಬೇಕಾಗಿದೆ. ಹೀಗಾಗಿ ಆನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕಾಗಿ ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಶಾಸಕರು ಒತ್ತಾಯಿಸಿದ್ದಾರೆ.
ಸುಳ್ಯ ಮಾತ್ರವಲ್ಲ ಮಡಿಕೇರಿ ಜಿಲ್ಲೆಯ ಹಲವು ಕಡೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದೆ, ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಕರಿಕೆ ಪ್ರದೇಶದಲ್ಲೂ ಕಾಡಾನೆ ಹಾವಳಿಯಿಂದ ಕೃಷಿಕರು ನಷ್ಟ ಅನುಭವಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…