ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಐತೂರು, ಕೊಣಾಜೆ, ಕೊಂಬಾರು ಮತ್ತು ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದು ಅಪಾರ ಕೃಷಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಬೆಂಗಳೂರು ವಿಕಾಸ ಸೌಧ ಕಚೇರಿಯಲ್ಲಿ ಭೇಟಿ ಮಾಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಕಳೆದ ಹಲವು ಸಮಯಗಳಿಂ ಕಾಡಾನೆಗಳ ಹಾವಳಿಯಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೃಷಿ ನಷ್ಟ, ಜೀವ ಹಾನಿ, ಜೀವ ಭಯ ಸೇರಿದಂತೆ ಆತಂಕದಿಂದ ಬದುಕಬೇಕಾಗಿದೆ. ಹೀಗಾಗಿ ಆನೆಗಳನ್ನು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕಾಗಿ ಮತ್ತು ಹಾನಿಯನ್ನು ತಪ್ಪಿಸಲು ಆನೆ ಕಂದಕ ಅಥವಾ ಸೋಲಾರ್ ಬೇಲಿ ಮತ್ತು ಸೋಲಾರ್ ಬೀದಿ ದೀಪ ಸಂರಕ್ಷಣಾ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಶಾಸಕರು ಒತ್ತಾಯಿಸಿದ್ದಾರೆ.
ಸುಳ್ಯ ಮಾತ್ರವಲ್ಲ ಮಡಿಕೇರಿ ಜಿಲ್ಲೆಯ ಹಲವು ಕಡೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದೆ, ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಕರಿಕೆ ಪ್ರದೇಶದಲ್ಲೂ ಕಾಡಾನೆ ಹಾವಳಿಯಿಂದ ಕೃಷಿಕರು ನಷ್ಟ ಅನುಭವಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…