ಸುಳ್ಯ ನಗರಪಂಚಾಯತ್‌ ಸಭೆಯಲ್ಲಿ ಸದಸ್ಯರ ನಡುವೆ ತಳ್ಳಾಟ | ಅಭಿವೃದ್ಧಿಯಿಂದ ಆರಂಭವಾಗಿ ಗುಜರಾತ್‌ ವರೆಗೆ ಚರ್ಚೆ…! |

November 2, 2022
2:19 PM

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.

Advertisement
Advertisement

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ  ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ  ವಿರುದ್ಧ ಘೋಷಣೆ ಕೂಗಿದರು.

Advertisement

ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು.  ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ  ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ‌ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group