ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು. ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…