ಸುದ್ದಿಗಳು

ಸುಳ್ಯ ನಗರಪಂಚಾಯತ್‌ ಸಭೆಯಲ್ಲಿ ಸದಸ್ಯರ ನಡುವೆ ತಳ್ಳಾಟ | ಅಭಿವೃದ್ಧಿಯಿಂದ ಆರಂಭವಾಗಿ ಗುಜರಾತ್‌ ವರೆಗೆ ಚರ್ಚೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.

Advertisement
Advertisement

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ  ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ  ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು.  ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ  ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ‌ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

2 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

3 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

3 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

4 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

5 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago