ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು. ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…