Advertisement
ಸುದ್ದಿಗಳು

ಸುಳ್ಯ ನಗರಪಂಚಾಯತ್‌ ಸಭೆಯಲ್ಲಿ ಸದಸ್ಯರ ನಡುವೆ ತಳ್ಳಾಟ | ಅಭಿವೃದ್ಧಿಯಿಂದ ಆರಂಭವಾಗಿ ಗುಜರಾತ್‌ ವರೆಗೆ ಚರ್ಚೆ…! |

Share

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.

Advertisement

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ  ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ  ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು.  ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ  ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ‌ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago