ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು. ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…