ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ ಗೂಡಾಗಿ ಪರಿಣಮಿಸಿದ ಸಭೆ ಬಳಿಕ ಪೊಲೀಸರ ಮಧ್ಯಪ್ರವೇಶವೂ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ನಡೆಯಿತು. ಸುಳ್ಯದಲ್ಲಿ ಹಲವು ಸಮಯಗಳಿಂದ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವಿಪಕ್ಷದ ಸದಸ್ಯರು ಆರೋಪಿಸಿದರು. ಸಭೆಗೆ ಇಂಜಿನಿಯರ್ ಹಾಗೂ ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ಎಂದು ವಿಪಕ್ಷಗಳು ಒತ್ತಾಯಿಸಿದವು. ಬಳಿಕ ವಿರೋಧ ಪಕ್ಷದ ಸದಸ್ಯರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾನ ಮರ್ಯಾದೆ ಶಬ್ದ ಬಳಕೆ , ವೈಯಕ್ತಿಕ ಚರ್ಚೆ, ತೀವ್ರ ಮಾತಿನ ಚಕಮಕಿ ನಡೆಯಿತು. ಅದಾದ ಬಳಿಕ ಮೋದಿ ಹೆಸರೂ ಉಲ್ಲೇಖವಾಯಿತು. ಹೀಗಾಗಿ ಮತ್ತಷ್ಟು ಚರ್ಚೆ ಚುರುಕಾಗಿ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಬಳಿಕ ಸಭೆಗೆ ಪೊಲೀಸರು ಆಗಮಿಸಿದರು. ಸದಸ್ಯರನ್ನು ಅಧಿಕಾರಿಗಳು ಸಮಾಧಾನಪಡಿಸಿದರು. ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…