Advertisement
ಸುದ್ದಿಗಳು

ನಶೆ ತಲೆಗೇರಿ ಪೊಲೀಸ್‌ ಅತಿಥಿಯಾದ… ! | ತಲವಾರು ಹಿಡಿದು ಓಡಾಡಿದವನ ಕತೆ…! |

Share

ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್‌ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್‌ ಆಯಿತು. ಈಗ ಪೊಲೀಸ್‌ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!

ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್.‌ ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್‌ ಆಯ್ತು. ಪೊಲೀಸ್‌ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್‌ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್‌ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

17 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

24 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

24 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago