ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್ ಆಯಿತು. ಈಗ ಪೊಲೀಸ್ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್. ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್ ಆಯ್ತು. ಪೊಲೀಸ್ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…