ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್ ಆಯಿತು. ಈಗ ಪೊಲೀಸ್ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್. ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್ ಆಯ್ತು. ಪೊಲೀಸ್ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…