ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್ ಆಯಿತು. ಈಗ ಪೊಲೀಸ್ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್. ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್ ಆಯ್ತು. ಪೊಲೀಸ್ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…