ಅಮಲು ತಲೆಗೇರಿದರೆ ಏನಾಗುತ್ತದೆ..? ಪೊಲೀಸ್ ಅತಿಥಿಯಾಗಬೇಕಾಗುತ್ತದೆ…!. ಹೀಗೆ ಒಂದು ಪ್ರಶ್ನೆ… ಒಂದು ಉತ್ತರ. ಇದಕ್ಕೆ ಕಾರಣ ಇದೆ. ಸುಳ್ಯದ ಕನಕಮಜಲಿನಲ್ಲಿ ಯುವಕನೊಬ್ಬ ತಲವಾರು ಹಿಡಿದು ರಸ್ತೆಯಲ್ಲಿ ಓಡಾಡಿದ. ಅದರ ವಿಡಿಯೋ ವೈರಲ್ ಆಯಿತು. ಈಗ ಪೊಲೀಸ್ ಅತಿಥಿಯಾದ. ನಶೆ ಇಳಿದಾಗ ಮಾಡಿದ ತಪ್ಪು ಅರಿವಾಯ್ತು…!
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ತಲವಾರು ಹಿಡಿದು ಯುವಕನೊಬ್ಬ ರಸ್ತೆಯಲ್ಲಿ ಸುತ್ತಾಡಿದ. ಈ ಯುವಕನ ಹೆಸರು ಸಂದೀಪ್. ಈತ ತಲವಾರು ಹಿಡಿದು ಓಡಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಯ್ತು. ಅದು ಸಾಮಾಜಿಕ ತಾಲತಾಣಗಳಲ್ಲಿ ವೈರಲ್ ಆಯ್ತು. ಪೊಲೀಸ್ ಠಾಣೆಗೂ ಸುದ್ದಿ ತಲಪಿತು. ದ ಕ ಜಿಲ್ಲೆ ಮೊದಲೇ ಸೂಕ್ಷ್ಮ ಪ್ರದೇಶವಾಗಿದೆ. ಈಗಾಗಲೇ ಅಶಾಂತಿಯ ವಾತಾವರಣ ತಣ್ಣಗಾಗುತ್ತಿದೆ. ಈ ನಡುವೆಯೇ ತಲವಾರು ಹಿಡಿದು ಓಡಾಟದ ದೃಶ್ಯ ಕಂಡು ಬಂದ ತಕ್ಷಣವೇ ಪೊಲೀಸರು ಜಾಗೃತರಾಗದರು. ಯುವಕ ಸಂದೀಪ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ, ಆತ ಉದ್ದೇಶಪೂರ್ವಕವಾಗಿ ಹೀಗೆ ತಲವಾರು ಹಿಡಿದು ಓಡಿದ್ದಲ್ಲ. ತಲೆಗೆ ಅಮಲು ಏರಿದ್ದರ ಪರಿಣಾಮ ಹೀಗಾಗಿದೆ. ಈಗ ಕೆಲವು ಸಮಯಗಳಿಂದ ಮದ್ಯಪಾನ ಬಿಟ್ಟಿದ್ದ. ನಿನ್ನೆ ಮತ್ತೆ ಮದ್ಯ ಸೇವಿಸಿದ ಪರಿಣಾಮ ತಲೆಗೆ ಒಮ್ಮೆಲೇ ನಶೆ ಏರಿದೆ. ಇದರ ಪರಿಣಾಮವಾಗಿ ಆತ ತಲವಾರು ಹಿಡಿದು ಓಡಾಡಿದ. ಸದ್ಯ ಪೊಲೀಸ್ ಅತಿಥಿಯಾಗಿದ ಯುವಕನನ್ನು ವಿಚಾರಣೆ ನಡೆಸಿದ್ದಾರೆ ಪೊಲೀಸರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…