ಸುಳ್ಯದ ರಸ್ತೆಗಳ ಅಭಿವೃದ್ಧಿಗೆ ಚಾಲನೆ | 172 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಚಾಲನೆ | ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿ |

August 27, 2022
10:06 PM

ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್‌ ಲೈನ್‌ ಮೂಲಕ ಟೆಂಡರ್‌ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.

ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror