ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್ ಲೈನ್ ಮೂಲಕ ಟೆಂಡರ್ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.
ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…