ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ದೊರೆತು ಬಹುಪಾಲು ರಸ್ತೆ ಅಭಿವೃದ್ಧಿಗೆ ಆ.26 ರಿಂದ ಆನ್ ಲೈನ್ ಮೂಲಕ ಟೆಂಡರ್ ಆಹ್ವಾನಕ್ಕೆ ಚಾಲನೆ ದೊರೆತಿದೆ.ಸೆ.19 ರ ಒಳಗಾಗಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಸಚಿವ ಎಸ್ ಅಂಗಾರ ಅವರ ವಿಶೇಷ ಮುತುವರ್ಜಿಯಿಂದ ಈ ಬಾರಿ ರಸ್ತೆಗಳಿಗೆ ಅನುದಾನ ಲಭ್ಯವಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿಯ ಕಡೆಗೆ ಸಚಿವ ಅಂಗಾರ ಅವರು ಗಮನಹರಿಸಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿಗೂ ಆದ್ಯತೆ ನೀಡಲಿದ್ದಾರೆ.
ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಮೂಲಕ ನಡೆಯುವ 172 ಕಾಮಗಾರಿಗಳಲ್ಲಿ ರಸ್ತೆ ಅಭಿವೃದ್ಧಿ ಸೇರಿದೆ. ಕನಿಷ್ಟ 25 ಲಕ್ಷ ರೂಪಾಯಿಯಿಂದ 2 ಕೋಟಿಯವರೆಗಿನ ರಸ್ತೆ ಕಾಮಗಾರಿಗಳು ನಡೆಯುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ಬಹುತೇಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ರಸ್ತೆ ಅಭಿವೃದ್ಧಿ ಬೇಡಿಕೆಗಳು ಇರುವ ರಸ್ತೆಗಳು ಈ ಬಾರಿ ಅಭಿವೃದ್ಧಿಯ ನಿರೀಕ್ಷೆ ಹೊಂದಿವೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…