Advertisement
ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

Advertisement
Advertisement
Advertisement
Advertisement

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

Advertisement

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

Advertisement

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

Advertisement

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

Advertisement

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

Advertisement
ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago