ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್ ಮುಂದೆ ಪ್ರತಿಭಟನಾ ಸಭೆಯನ್ನು ನಡೆಸಿದರು.
ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ. ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು ಹೇಳಿದರು.
ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ 2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.
ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.
ಸಭೆಯ ಬಳಿಕ ನ.ಪಂ. ಎದುರು ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…