ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

Advertisement
Advertisement

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

Advertisement

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

Advertisement
ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

3 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

3 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

4 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

4 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

4 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

4 hours ago