Advertisement
ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago