Advertisement
ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago