Advertisement
ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 hour ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

2 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

2 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

10 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

11 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago