Advertisement
ಸುದ್ದಿಗಳು

ಸುಳ್ಯ-ಕೊಡಿಯಾಲಬೈಲು-ದುಗಲಡ್ಕ ರಸ್ತೆ ಅಭಿವೃದ್ಧಿಯ ಭಿಕ್ಷೆ….! | ರಸ್ತೆ ದುರಸ್ತಿಗೆ ಆಗ್ರಹಿಸಿ‌ ಸುಳ್ಯ ನಗರ ಪಂಚಾಯತ್ ಮುಂದೆ ಧರಣಿ | ನಿಧಿ ಸಂಗ್ರಹಣೆಯ ಮೂಲಕ ಆಡಳಿತಕ್ಕೆ ಟಾಂಗ್‌ |

Share

ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾರ್ವಜನಿಕರು ದುರಸ್ತಿಗೆ ಬೇಡಿಕೆಯ ಭಿಕ್ಷೆಯನ್ನು  ಆಡಳಿತದ ಮುಂದೆ ಇರಿಸಿದರು. ಕಳೆದ 25 ವರ್ಷಗಳಿಂದಲೂ ಈ ರಸ್ತೆ ದುರಸ್ತಿಗೆ ಮನವಿ ಸಲ್ಲಿಸುತ್ತಲೇ ಬಂದ ಜನರು ಇದೀಗ  ನಿಧಿ ಸಂಗ್ರಹಣಾ ಅಭಿಯಾನದ ಅಣಕು ಅಭಿಯಾನದ ಮೂಲಕ ಸುಳ್ಯ ನಗರ ಪಂಚಾಯತ್‌ ಮುಂದೆ ಪ್ರತಿಭಟನಾ ಸಭೆಯನ್ನು  ನಡೆಸಿದರು.

ನೂರಾರು ಸಂಖ್ಯೆಯಲ್ಲಿ ರಸ್ತೆ ಫಲಾನುಭವಿಗಳು  ಮೆರವಣಿಗೆಯಲ್ಲಿ ಆಗಮಿಸಿದರು. ಸಭೆಯಲ್ಲಿ ಮಾತನಾಡಿದ  ಗಣೇಶ್ ಭಟ್ “ಸುಳ್ಯ – ಕೊಡಿಯಾಲಬೈಲು – ದುಗಲಡ್ಕ ರಸ್ತೆ ಅಭಿವೃದ್ಧಿಗೆ ಕಳೆದ ಅನೇಕ ಸಮಯಗಳಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಕೂಡಾ ಸಂಪೂರ್ಣ ದುರಸ್ತಿ ಕಾರ್ಯ ನಡೆಯಲಿಲ್ಲ.  ಹಲವು ಭರವಸೆಗಳು ಸಿಕ್ಕಿದರೂ ಇದುವರೆಗೂ ಆಗಿಲ್ಲ. ಶಾಸಕರು ಈ ರಸ್ತೆ ಅಭಿವೃದ್ಧಿ ಮಾಡಬಹುದೆಂದು ನಿರೀಕ್ಷಿಸಿದ್ದೆವು, ಮಂತ್ರಿಯಾದರೂ  ನಿರೀಕ್ಷಿತ ಮಟ್ಟದ ಕೆಲಸ ಮಾಡಿಲ್ಲ ಎಂದು‌ ಹೇಳಿದರು.

ಉದ್ಯಮಿ ಸುರೇಶ್ ಕಮಿಲ ಮಾತನಾಡಿ “ಸುಳ್ಯದಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿಲ್ಲ. ಮೂಲಭೂತ ಬೇಡಿಕೆ, ವ್ಯವಸ್ಥೆ ಅದು. ಈಗ ನಮ್ಮ ರಸ್ತೆ ದುರಸ್ತಿಯಾಗದೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.

ಸೀತಾನಂದ ಮಾತನಾಡಿ ಹೋರಾಟ ಆರಂಭವಾದಾಗ ಗುದ್ದಲಿ ಪೂಜೆ ನಡೆಯುತ್ತದೆ, 9 ಕಿಮೀ ರಸ್ತೆಯಲ್ಲಿ  2 ಕಿಮೀ ಮಾತ್ರಾ ಅಭಿವೃದ್ಧಿ ಆದರೆ ಸಾಕೇ ಎಂದು ಪ್ರಶ್ನಿಸಿದರು.

ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಕೃಷಿಕ ಸುರೇಶ್ ಅಮೈ , ದುಗಲಡ್ಕದ ಬಾಲಕೃಷ್ಣ ನಾಯರ್ ಮೊದಲಾದವರು ಮಾತನಾಡಿದರು.

ಸಭೆಯ ಬಳಿಕ ನ.ಪಂ. ಎದುರು‌ ಇಡಲಾಗಿದ್ದ ನಿಧಿ ಸಂಗ್ರಹಣಾ ಡಬ್ಬಿಗೆ ಸೇರಿದವರು ಹಣ ಹಾಕಿದರು.

ಕೇಸರಿ ಶಾಲು ಹಾಕಿ ಬಂದ ಪ್ರತಿಭಟನಾಕಾರರು...!
ಈ ರಸ್ತೆಗಾಗಿ ಹೋರಾಟ ಆರಂಭವಾದಾಗ ಅದು ಕಾಂಗ್ರೆಸ್‌ ಹೋರಾಟ ಎಂದು ಕೆಲವು ನಾಯಕರು ಹೇಳಿದ್ದರು. ಇದಕ್ಕಾಗಿ ನಾವು ಈ ಹೋರಾಟದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ರಾಜಕೀಯ ರಹಿತವಾಗಿ ಹೋರಾಟ ಮಾಡುತ್ತಿದ್ದೇವೆ. ಮೂಲಭೂತ ವ್ಯವಸ್ಥೆಗಾಗಿ ಬೇಡಿಕೆ ಇದೆ. ಹಾಗಿದ್ದರೂ ಇದಕ್ಕೆ ರಾಜಕೀಯ ಬಣ್ಣ ನೀಡಿದ್ದಾರೆ. ಇಲ್ಲಿನ ಬಹುಪಾಲು ಮಂದಿ ಈಗಿನ ಆಡಳಿತ ಪಕ್ಷದ ಪರವೇ ಕೆಲಸ ಮಾಡಿದವರು ಎಂದು ಆಕ್ರೋಶದಿಂದ ಪ್ರತಿಭಟನಾ ಸಭೆಗೆ ಆಗಮಿಸುವ ವೇಳೆ ಕೇಸರಿ ಶಾಲು ಹಾಕಿ ಕೆಲವರು ಆಗಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

2 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

22 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

22 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago