Advertisement
ಸುದ್ದಿಗಳು

ವಾರೆವ್ಹಾ ಸುಳ್ಯ…! | ಸಮಸ್ಯೆಗಳನ್ನು ಹೇಳಲೂಬಾರದು…ಪ್ರಶ್ನಿಸಲೂಬಾರದು..! | ಕೀಬೋರ್ಡ್‌ ವಾರಿಯರ್‌ನಿಂದ ಪೊಲೀಸ್‌ ದೂರಿನವರೆಗೆ…! |

Share

ಕೀಬೋರ್ಡ್‌ ವಾರಿಯರ್‌ನಿಂದ ಈಗ ಪೊಲೀಸ್‌ ಠಾಣೆಗೆ ದೂರು ನೀಡುವವರೆಗೆ ತಲುಪಿದೆ ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷರ ಸುದ್ದಿ. ವಾರಗಳ ಹಿಂದೆ ಸುಳ್ಯ ರಸ್ತೆ ಸಮಸ್ಯೆ ಬಗ್ಗೆ ಸಾಮಾಜಿಕ ಕಾರ್ಯಕರ್ತ, ರೇಡಿಯೋ ಜಾಕಿ ,ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುತ್ತಿರುವ ಆರ್‌ ಜೆ ತ್ರಿಶೂಲ್‌ ಗೌಡ ಕಂಬಳ ರಸ್ತೆ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ಇದೀಗ ಈ ಸುದ್ದಿ ಪೊಲೀಸ್‌ ಠಾಣೆಯವರೆಗೂ ತಲುಪಿದೆ. ಠಾಣೆಗೆ ಮುಟ್ಟಿಸಿದವರು ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷರು…! ಕಾರಣ ಏನು ಇಲ್ಲಿದೆ ಓದಿ.  

ಸುಳ್ಯ ನಗರದ  ರಸ್ತೆಗುಂಡಿಗಳ ಬಗ್ಗೆ  ಆರ್‌ ಜೆ ತ್ರಿಶೂಲ್ ಗೌಡ ಕಂಬಳ ಅವರು ಸೋಶಿಯಲ್ ಮೀಡಿಯಾಗಳ ಮೂಲಕ ಗಮನಸೆಳೆದಿದ್ದರು. ಇದು ಚರ್ಚೆಯಾಗುತ್ತಿದ್ದಂತೆಯೇ ಸುಳ್ಯ ನಗರದ ಜವಾಬ್ದಾರಿ ಇರುವ ಸ್ವತ: ನಗರ ಪಂಚಾಯತ್‌ ಅಧ್ಯಕ್ಷರು ‘ಕೀಬೋರ್ಡ್ ವಾರಿಯರ್’ ಎಂದು ಟೀಕಿಸಿದ್ದರು. ಇದಕ್ಕೆ ಆರ್‌ ಜೆ ತ್ರಿಶೂಲ್‌ ಸೇರಿದಂತೆ ಹಲವರು ಸಾಮಾಜಿಕ ಜವಾಬ್ದಾರಿ ಇರುವ ವ್ಯಕ್ತಿಯೊಬ್ಬರ ಈ ರೀತಿಯ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾನ್ಯ ವ್ಯಕ್ತಿಯ ಟೀಕೆಗೂ ಜವಾಬ್ದಾರಿ ಇರುವ ವ್ಯಕ್ತಿಗಳ ಟೀಕೆಗೂ ವ್ಯತ್ಯಾಸ ಇದೆ ಎಂದೂ ಹೇಳಿದ್ದರು. ಹೀಗಾಗಿ ಆರ್‌ ಜೆ ತ್ರಿಶೂಲ್‌ ಅವರು ನಗರ ಪಂಚಾಯತ್‌ ಅಧ್ಯಕ್ಷರಿಗೆ ಸವಾಲು ಹಾಕಿದ್ದರು, ಸುಳ್ಯದ ಸಮಸ್ಯೆಗಳ ಪಟ್ಟಿ ಜೊತೆ ಬರುತ್ತೇನೆ ಅಲ್ಲಿಯೇ ಉತ್ತರಿಸಿ ಎಂದೂ ಸವಾಲು ಹಾಕಿದ್ದರು. ಕೊನೆಗೆ ದೂರವಾಣಿ ಕರೆಯ ಮೂಲಕವೂ ಸವಾಲು ಹಾಕಲಾಗಿದ್ದು ವೈರಲ್‌ ಆಗಿತ್ತು. ಸಹಜವಾಗಿಯೇ ಸುಳ್ಯದ ಅನೇಕ ಮೂಲಭೂತ ಸಮಸ್ಯೆಗಳಿಂದ ಬೇಸತ್ತ ಜನರು ಆರ್‌ ಜೆ ತ್ರಿಶೂಲ್‌ ಅವರಿಗೆ ಬೆಂಬಲಿಸಿದ್ದರು ಕೂಡಾ.

Advertisement

ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಾದ್ದು ಮಾಧ್ಯಮಗಳ, ಸಾಮಾಜಿಕ ಕಾರ್ಯಕರ್ತರ, ಆಯಾ ಪಕ್ಷದ ಕಾರ್ಯಕರ್ತರ, ವಿಪಕ್ಷಗಳ, ಜನರ ಕೆಲಸವೂ ಹೌದು. ನಿರೀಕ್ಷಿತ ಮಟ್ಟದಲ್ಲಿ ಕೆಲಸ ಆಗದೇ ಇದ್ದಲ್ಲಿ ಜನರೂ ಅಸಮಾಧಾನಗೊಳ್ಳುತ್ತಾರೆ. ಮತ ನೀಡಿದವರು ಪ್ರಶ್ನಿಸಲೇಬೇಕು, ಇದು ಪ್ರಜಾಪ್ರಭುತ್ವ. ಅಧಿಕಾರದಲ್ಲಿ ಇರುವವರನ್ನು, ಜವಾಬ್ದಾರಿಯಲ್ಲಿ ಇರುವವರನ್ನು ಮಾಧ್ಯಮಗಳೂ ಪ್ರಶ್ನಿಸಬೇಕು. ಆದರೆ ಸುಳ್ಯದಲ್ಲಿ ಮಾತ್ರಾ ಹಾಗಲ್ಲ. ಇಲ್ಲಿ ಪ್ರಶ್ನಿಸುವ ಮಾತು ಬಿಡಿ, ಸಮಸ್ಯೆಗಳನ್ನೂ ಹೇಳುವ ಹಾಗಿಲ್ಲದ ಸ್ಥಿತಿ ಬಂದಿರುವುದು  ಇಲ್ಲಿನ ಜನರ ದುರಂತ…!. ಇಲ್ಲಿ ಪ್ರಶ್ನಿಸಿದವರು ವಿವಿಧ ಬಿರುದುಗಳನ್ನು ಪಡೆಯಬೇಕಾಗುತ್ತದೆ. ಈ ಹಿಂದೆ ಸ್ವಚ್ಛತೆಯ ಜಾಗೃತಿ ಮಾಡುತ್ತಿರುವ ಚಿತ್ರನಟ ಅನಿರುದ್ಧ ಅವರಿಗೂ ಕಿರಿಕಿರಿಯಾಗಿತ್ತು. ರಸ್ತೆ ಸಮಸ್ಯೆ ಹೇಳಿದ ಆರ್‌ ಜೆ ತ್ರಿಶೂಲ್‌ ಅವರಿಗೂ ಅದೇ ಆಗಿದೆ. ಸುಳ್ಯದ ವಿವಿಧ ಕಡೆಯ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನ ಸೆಳೆದವರಿಗೆಲ್ಲರಿಗೂ ಇದೇ ಮಾದರಿಯ ಅನುಭವ ಆಗಿದೆ. ಹಾಗೆಂದು ಆ ಸಮಸ್ಯೆಗಳ ಪರಿಹಾರ ಮಾಡುತ್ತೇವೆ ಎನ್ನುವ ಯಾವ ಭರವಸೆಯೂ ಬಂದಿಲ್ಲ…!. ಇದು ಪ್ರಜಾಪ್ರಭುತ್ವ..!.

ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಗರ ಪಂಚಾಯತ್‌ ಅಧ್ಯಕ್ಷರು ಸುಳ್ಯ‌ ಠಾಣೆಗೆ ದೂರು ನೀಡಿದ್ದಾರೆ. ಆರ್‌ ಜೆ ತ್ರಿಶೂಲ್‌ ಅವರು ಪೇಸ್‌ ಬುಕ್‌ ನಲ್ಲಿ ಹಾಕಿರುವ ಪೋಸ್ಟ್‌ಗಳಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆ ಬಂದಿರುವುದೇ ಈಗ ದೂರು ನೀಡಲು ಕಾರಣವಾಗಿದೆ…!. ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆಯೂ ಬಂದಿದೆ. ಸುಳ್ಯದ ಹಲವು ಸಮಸ್ಯೆಗಳನ್ನೂ ಗಮನ ಸೆಳೆದಿದ್ದಾರೆ. ಸದ್ಯ ಪೊಲೀಸ್‌ ಠಾಣೆಯಿಂದ ನೋಟೀಸು ಬಂದರೆ ಪೊಲೀಸರ ಮುಂದೆ ಹಾಜರಾಗುವುದಾಗಿ ತ್ರಿಶೂಲ್‌ ತಿಳಿಸಿದ್ದಾರೆ.

Advertisement

ಸುಳ್ಯದ ಸಮಸ್ಯೆಗಳನ್ನು ಇನ್ನು ಎಲ್ಲಿ? ಯಾರ ಜೊತೆ ಹೇಳುವುದು ? ಎನ್ನುವುದು ಸದ್ಯ ಟ್ರೋಲ್‌ ಆಗುತ್ತಿರುವ ವಿಷಯ. ಈಗಾಗಲೇ ಹಲವಾರು ಮಂದಿ ಪೊಲೀಸ್‌ ದೂರೂ ನೀಡಿರುವ ನಗರ ಪಂಚಾಯತ್‌ ಅಧ್ಯಕ್ಷರ ನಡೆಯನ್ನು ಖಂಡಿಸಿದ್ದಾರೆ.

ಸುಳ್ಯದ ಸಮಸ್ಯೆಗಳ ಬಗ್ಗೆ ಗಮನಸೆಳೆದ ಆರ್‌ ಜೆ ತ್ರಿಶೂಲ್‌ ಅವರು ವಾಸ್ತವನ್ನು ತಿಳಿಸಿದ್ದಾರೆ. ಅವರ ಹಾಗೂ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದರೆ  ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ  ಪ್ರತಿಭಟನೆ ಮಾಡುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago