Advertisement
ಸುದ್ದಿಗಳು

ವಾರೆವ್ಹಾ ಸುಳ್ಯ…! | ಸಮಸ್ಯೆಗಳನ್ನು ಹೇಳಲೂಬಾರದು…ಪ್ರಶ್ನಿಸಲೂಬಾರದು..! | ಕೀಬೋರ್ಡ್‌ ವಾರಿಯರ್‌ನಿಂದ ಪೊಲೀಸ್‌ ದೂರಿನವರೆಗೆ…! |

Share

ಕೀಬೋರ್ಡ್‌ ವಾರಿಯರ್‌ನಿಂದ ಈಗ ಪೊಲೀಸ್‌ ಠಾಣೆಗೆ ದೂರು ನೀಡುವವರೆಗೆ ತಲುಪಿದೆ ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷರ ಸುದ್ದಿ. ವಾರಗಳ ಹಿಂದೆ ಸುಳ್ಯ ರಸ್ತೆ ಸಮಸ್ಯೆ ಬಗ್ಗೆ ಸಾಮಾಜಿಕ ಕಾರ್ಯಕರ್ತ, ರೇಡಿಯೋ ಜಾಕಿ ,ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುತ್ತಿರುವ ಆರ್‌ ಜೆ ತ್ರಿಶೂಲ್‌ ಗೌಡ ಕಂಬಳ ರಸ್ತೆ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ಇದೀಗ ಈ ಸುದ್ದಿ ಪೊಲೀಸ್‌ ಠಾಣೆಯವರೆಗೂ ತಲುಪಿದೆ. ಠಾಣೆಗೆ ಮುಟ್ಟಿಸಿದವರು ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷರು…! ಕಾರಣ ಏನು ಇಲ್ಲಿದೆ ಓದಿ.  

ಸುಳ್ಯ ನಗರದ  ರಸ್ತೆಗುಂಡಿಗಳ ಬಗ್ಗೆ  ಆರ್‌ ಜೆ ತ್ರಿಶೂಲ್ ಗೌಡ ಕಂಬಳ ಅವರು ಸೋಶಿಯಲ್ ಮೀಡಿಯಾಗಳ ಮೂಲಕ ಗಮನಸೆಳೆದಿದ್ದರು. ಇದು ಚರ್ಚೆಯಾಗುತ್ತಿದ್ದಂತೆಯೇ ಸುಳ್ಯ ನಗರದ ಜವಾಬ್ದಾರಿ ಇರುವ ಸ್ವತ: ನಗರ ಪಂಚಾಯತ್‌ ಅಧ್ಯಕ್ಷರು ‘ಕೀಬೋರ್ಡ್ ವಾರಿಯರ್’ ಎಂದು ಟೀಕಿಸಿದ್ದರು. ಇದಕ್ಕೆ ಆರ್‌ ಜೆ ತ್ರಿಶೂಲ್‌ ಸೇರಿದಂತೆ ಹಲವರು ಸಾಮಾಜಿಕ ಜವಾಬ್ದಾರಿ ಇರುವ ವ್ಯಕ್ತಿಯೊಬ್ಬರ ಈ ರೀತಿಯ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾನ್ಯ ವ್ಯಕ್ತಿಯ ಟೀಕೆಗೂ ಜವಾಬ್ದಾರಿ ಇರುವ ವ್ಯಕ್ತಿಗಳ ಟೀಕೆಗೂ ವ್ಯತ್ಯಾಸ ಇದೆ ಎಂದೂ ಹೇಳಿದ್ದರು. ಹೀಗಾಗಿ ಆರ್‌ ಜೆ ತ್ರಿಶೂಲ್‌ ಅವರು ನಗರ ಪಂಚಾಯತ್‌ ಅಧ್ಯಕ್ಷರಿಗೆ ಸವಾಲು ಹಾಕಿದ್ದರು, ಸುಳ್ಯದ ಸಮಸ್ಯೆಗಳ ಪಟ್ಟಿ ಜೊತೆ ಬರುತ್ತೇನೆ ಅಲ್ಲಿಯೇ ಉತ್ತರಿಸಿ ಎಂದೂ ಸವಾಲು ಹಾಕಿದ್ದರು. ಕೊನೆಗೆ ದೂರವಾಣಿ ಕರೆಯ ಮೂಲಕವೂ ಸವಾಲು ಹಾಕಲಾಗಿದ್ದು ವೈರಲ್‌ ಆಗಿತ್ತು. ಸಹಜವಾಗಿಯೇ ಸುಳ್ಯದ ಅನೇಕ ಮೂಲಭೂತ ಸಮಸ್ಯೆಗಳಿಂದ ಬೇಸತ್ತ ಜನರು ಆರ್‌ ಜೆ ತ್ರಿಶೂಲ್‌ ಅವರಿಗೆ ಬೆಂಬಲಿಸಿದ್ದರು ಕೂಡಾ.

ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಾದ್ದು ಮಾಧ್ಯಮಗಳ, ಸಾಮಾಜಿಕ ಕಾರ್ಯಕರ್ತರ, ಆಯಾ ಪಕ್ಷದ ಕಾರ್ಯಕರ್ತರ, ವಿಪಕ್ಷಗಳ, ಜನರ ಕೆಲಸವೂ ಹೌದು. ನಿರೀಕ್ಷಿತ ಮಟ್ಟದಲ್ಲಿ ಕೆಲಸ ಆಗದೇ ಇದ್ದಲ್ಲಿ ಜನರೂ ಅಸಮಾಧಾನಗೊಳ್ಳುತ್ತಾರೆ. ಮತ ನೀಡಿದವರು ಪ್ರಶ್ನಿಸಲೇಬೇಕು, ಇದು ಪ್ರಜಾಪ್ರಭುತ್ವ. ಅಧಿಕಾರದಲ್ಲಿ ಇರುವವರನ್ನು, ಜವಾಬ್ದಾರಿಯಲ್ಲಿ ಇರುವವರನ್ನು ಮಾಧ್ಯಮಗಳೂ ಪ್ರಶ್ನಿಸಬೇಕು. ಆದರೆ ಸುಳ್ಯದಲ್ಲಿ ಮಾತ್ರಾ ಹಾಗಲ್ಲ. ಇಲ್ಲಿ ಪ್ರಶ್ನಿಸುವ ಮಾತು ಬಿಡಿ, ಸಮಸ್ಯೆಗಳನ್ನೂ ಹೇಳುವ ಹಾಗಿಲ್ಲದ ಸ್ಥಿತಿ ಬಂದಿರುವುದು  ಇಲ್ಲಿನ ಜನರ ದುರಂತ…!. ಇಲ್ಲಿ ಪ್ರಶ್ನಿಸಿದವರು ವಿವಿಧ ಬಿರುದುಗಳನ್ನು ಪಡೆಯಬೇಕಾಗುತ್ತದೆ. ಈ ಹಿಂದೆ ಸ್ವಚ್ಛತೆಯ ಜಾಗೃತಿ ಮಾಡುತ್ತಿರುವ ಚಿತ್ರನಟ ಅನಿರುದ್ಧ ಅವರಿಗೂ ಕಿರಿಕಿರಿಯಾಗಿತ್ತು. ರಸ್ತೆ ಸಮಸ್ಯೆ ಹೇಳಿದ ಆರ್‌ ಜೆ ತ್ರಿಶೂಲ್‌ ಅವರಿಗೂ ಅದೇ ಆಗಿದೆ. ಸುಳ್ಯದ ವಿವಿಧ ಕಡೆಯ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನ ಸೆಳೆದವರಿಗೆಲ್ಲರಿಗೂ ಇದೇ ಮಾದರಿಯ ಅನುಭವ ಆಗಿದೆ. ಹಾಗೆಂದು ಆ ಸಮಸ್ಯೆಗಳ ಪರಿಹಾರ ಮಾಡುತ್ತೇವೆ ಎನ್ನುವ ಯಾವ ಭರವಸೆಯೂ ಬಂದಿಲ್ಲ…!. ಇದು ಪ್ರಜಾಪ್ರಭುತ್ವ..!.

ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಗರ ಪಂಚಾಯತ್‌ ಅಧ್ಯಕ್ಷರು ಸುಳ್ಯ‌ ಠಾಣೆಗೆ ದೂರು ನೀಡಿದ್ದಾರೆ. ಆರ್‌ ಜೆ ತ್ರಿಶೂಲ್‌ ಅವರು ಪೇಸ್‌ ಬುಕ್‌ ನಲ್ಲಿ ಹಾಕಿರುವ ಪೋಸ್ಟ್‌ಗಳಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆ ಬಂದಿರುವುದೇ ಈಗ ದೂರು ನೀಡಲು ಕಾರಣವಾಗಿದೆ…!. ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆಯೂ ಬಂದಿದೆ. ಸುಳ್ಯದ ಹಲವು ಸಮಸ್ಯೆಗಳನ್ನೂ ಗಮನ ಸೆಳೆದಿದ್ದಾರೆ. ಸದ್ಯ ಪೊಲೀಸ್‌ ಠಾಣೆಯಿಂದ ನೋಟೀಸು ಬಂದರೆ ಪೊಲೀಸರ ಮುಂದೆ ಹಾಜರಾಗುವುದಾಗಿ ತ್ರಿಶೂಲ್‌ ತಿಳಿಸಿದ್ದಾರೆ.

ಸುಳ್ಯದ ಸಮಸ್ಯೆಗಳನ್ನು ಇನ್ನು ಎಲ್ಲಿ? ಯಾರ ಜೊತೆ ಹೇಳುವುದು ? ಎನ್ನುವುದು ಸದ್ಯ ಟ್ರೋಲ್‌ ಆಗುತ್ತಿರುವ ವಿಷಯ. ಈಗಾಗಲೇ ಹಲವಾರು ಮಂದಿ ಪೊಲೀಸ್‌ ದೂರೂ ನೀಡಿರುವ ನಗರ ಪಂಚಾಯತ್‌ ಅಧ್ಯಕ್ಷರ ನಡೆಯನ್ನು ಖಂಡಿಸಿದ್ದಾರೆ.

ಸುಳ್ಯದ ಸಮಸ್ಯೆಗಳ ಬಗ್ಗೆ ಗಮನಸೆಳೆದ ಆರ್‌ ಜೆ ತ್ರಿಶೂಲ್‌ ಅವರು ವಾಸ್ತವನ್ನು ತಿಳಿಸಿದ್ದಾರೆ. ಅವರ ಹಾಗೂ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದರೆ  ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ  ಪ್ರತಿಭಟನೆ ಮಾಡುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

50 minutes ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

7 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

15 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

19 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

24 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago