MIRROR FOCUS

ಸುಳ್ಯದ ರಸ್ತೆ ಗುಂಡಿಗಳಿಗೆ ತೇಪೆ | ರಸ್ತೆ ಗುಂಡಿ ಮುಚ್ಚಲು ಬರಬೇಕಾಯ್ತು ಡಾ.ಜ್ಞಾನೇಶ್…!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಕಡಿಮೆಯಾದ ತಕ್ಷಣವೇ ಸುಳ್ಯದ ಪ್ರಮುಖ ಗುಂಡಿಗಳಿಗೆ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ಕಾಂಕ್ರೀಟ್‌ ಮಿಕ್ಸ್‌ ಮೂಲಕ ತೇಪೆ ಹಾಕಲಾಯಿತು. ಇಚ್ಛಾ ಶಕ್ತಿ ಇದ್ದರೆ ಯಾವ ಕೆಲಸವನ್ನೂ ಮಾಡಬಹುದು  ಎನ್ನುವುದನ್ನು ತೋರಿಸಿದ ಡಾ.ಜ್ಞಾನೇಶ್‌ ಅವರನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಗ್ರಾಮೀಣ ಭಾರತ ಮಾತ್ರವಲ್ಲ ಈಗ ನಗರ ಭಾರತವನ್ನೂ ಜನರೇ ದುರಸ್ತಿ ಮಾಡಬೇಕಾದ ಸ್ಥಿತಿ ಬಂದಿದೆ…!.

Advertisement
Advertisement

ಕಳೆದ ವಾರವಷ್ಟೇ ಸುಳ್ಯದ ನಗರದ ರಸ್ತೆ ಹೊಂಡಗಳು, ಸುಳ್ಯದ ಕಸದ ಸಮಸ್ಯೆ ಸೇರಿದಂತೆ ಹಲವು ರಸ್ತೆಗಳು ವಿವಾದಕ್ಕೆ ಕಾರಣವಾಗಿತ್ತು. ಸುಳ್ಯದ ರಸ್ತೆಯ ಸಮಸ್ಯೆ ಬಗ್ಗೆ ಆರ್‌ ಜೆ ತ್ರಿಶೂಲ್‌ ಗೌಡ ಕಂಬಳ  ಅವರು ವಿಡಿಯೋ ಮೂಲಕ ಎಚ್ಚರಿಸಿದ್ದರು. ಇದಕ್ಕೆ ಕೀಬೋರ್ಡ್‌ ವಾರಿಯರ್‌ ಎಂದು ನಗರ ಪಂಚಾಯತ್ ಅಧ್ಯಕ್ಷರು ಟೀಕಿಸಿದ್ದರು. ಅದಕ್ಕೂ ಹಿಂದೆ ಸುಳ್ಯದ ಕಸದ ಸಮಸ್ಯೆಯ ಬಗ್ಗೆಯೂ ನಟ ಅನಿರುದ್ದ್‌ ಅವರು ಎಚ್ಚರಿಸಿದಾಗ ಲಾರಿ ಕಳುಹಿಸಿಕೊಡಿ ಎಂದು ನಗರ ಪಂಚಾಯತ್‌ ಅಧ್ಯಕ್ಷ ಛೇಡಿಸಿದ್ದರು. ಹೀಗಾಗಿ ಇದೆರಡೂ ವಿಷಯಗಳು ಸಾರ್ವಜನಿಕವಾಗಿ ಚರ್ಚೆಯಾಗಿತ್ತು. ಸುಳ್ಯ ನಗರದ ಹಲವು ಸಮಸ್ಯೆಗಳು ಗಮನ ಸೆಳೆದಿದ್ದವು.‌ಮುಂದುವರಿದು ಆರ್‌ ಜೆ ತ್ರಿಶೂಲ್‌ ವಿರುದ್ಧ ಪೊಲೀಸ್‌ ದೂರು ಕೂಡಾ ನೀಡಲಾಗಿತ್ತು. ಆದರೆ  ಆಡಳಿತದ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಒಬ್ಬ ನಗರ ಪಂಚಾಯತ್‌ ಅಧ್ಯಕ್ಷ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕೇ ಹೊರತು ರಚನಾತ್ಮಕ ಟೀಕೆಗಳನ್ನು ಹತ್ತಿಕ್ಕುವ ಪ್ರಯತ್ನ ಸಲ್ಲದು ಎಂದು ಹೇಳಿದ್ದರು.

ಇಷ್ಟೆಲ್ಲಾ ಚರ್ಚೆಗಳ ನಡುವೆಯೂ ಸುಳ್ಯದ ರಸ್ತೆಗಳಿಗೆ ಮುಕ್ತಿ ಸಿಕ್ಕಿರಲಿಲ್ಲ. ರಸ್ತೆ ಹೊಂಡಗಳಿಂದ ಸುಳ್ಯ ನಗರದಲ್ಲಿ ರಸ್ತೆಯಲ್ಲಿ ಜನರಿಗೆ ಸಂಚಾರಕ್ಕೆ ತೀವ್ರ ತೊಂದರೆ ಆಗಿರುವ ಹೊಂಡಗಳನ್ನುಕೂಡಾ ಮುಚ್ಚುವ ಕೆಲಸವನ್ನು ಆಡಳಿತವು ಮಾಡಿರಲಿಲ್ಲ. ಮಳೆ ಸ್ವಲ್ಪ ಕಡಿಮೆಯಾದ ತಕ್ಷಣವೇ ತೇಪೆ ಕಾರ್ಯ ಮಾಡಲು ಸಾಧ್ಯವಿತ್ತು. ಇದೀಗ ಈ ಕೆಲಸವನ್ನು  ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ತೇಪೆ ಹಾಕಲಾಗಿದೆ. ಸುಳ್ಯ ನಗರದ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥ ಬೀದಿಯಲ್ಲಿ ನಿರ್ಮಾಣವಾದ ಹೊಂಡಕ್ಕೆ ಸಿಮೆಂಟ್ ಜಲ್ಲಿ ಮಿಕ್ಸ್ ಹಾಕಿ ಹೊಂಡ‌ ತುಂಬಿ ತೇಪೆ ಹಾಕಲಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.

Advertisement

ಸುಳ್ಯ ನಗರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹೊಂಡ ಸೃಷ್ಠಿಯಾಗಿ ಸುಮಾರು ಒಂದೂವರೆ ತಿಂಗಳಿನಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದ್ದರೂ, ಭಾರೀ ಚರ್ಚೆ, ವಿವಾದ ಉಂಟಾದರೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯಾಗಲೀ ನಗರ ಪಂಚಾಯತ್ ಆಗಲೀ ರಸ್ತೆಯ ಗುಂಡಿಯನ್ನು ಮುಚ್ಚಿಸುವ ಗೋಜಿಗೆ ಹೋಗಿರಲಿಲ್ಲ. ಡಾ.ಜ್ಞಾನೇಶ್ ಅವರು ತಮ್ಮ ಕೆಲಸದವರೊಂದಿಗೆ ವಿವಿಧ ಕಡೆಗಳಲ್ಲಿರುವ ಹೊಂಡಗಳನ್ನು ಸಿಮೆಂಟ್ ಜಲ್ಲಿ ಮಿಕ್ಸ್ ಹಾಕಿ‌ ಮುಚ್ಚಿಸಿದ್ದಾರೆ.‌ ಸ್ವಲ್ಪ ಮಳೆ ಕಡಿಮೆಯಾದರೂ ಇಂತಹ ಕೆಲಸ ಮಾಡಲು ಸಾಧ್ಯವಿದೆ, ಜನಪರವಾಗಿ ಕೆಲಸ ಮಾಡಬಹುದು ಎನ್ನುವುದನ್ನು ಡಾ.ಜ್ಞಾನೇಶ್‌ ಅವರು ಆಡಳಿತಕ್ಕೆ ತೋರಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

27 minutes ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

51 minutes ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

9 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

9 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

9 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

9 hours ago