ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನ | ಅರಂತೋಡಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ |

November 20, 2022
2:08 PM

ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು.

Advertisement
Advertisement
Advertisement
ಕಾರ್ಯಕ್ರಮ ವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹದೇವ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕನ್ನಡ, ನಾಡು- ನುಡಿ ಉಳಿಸುವ ಕೆಲಸ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.

Advertisement
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಾಗೂ ಕಾಲೇಜಿನ ಸಂಚಾಲಕ ಕೆ.ಆರ್.ಗಂಗಾಧರ ಮಾತನಾಡಿ, ಇಂತಹ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳು ಗೆದ್ದರೂ, ಸೋತರು ಅದನ್ನು ಸವಾಲಾಗಿ ಸ್ವೀಕರಿಸಿ ಬದುಕಿನ ಪಾಠವನ್ನು ಕಲಿಯಬೇಕಿದೆ ಎಂದರು.

ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದರು.

Advertisement
ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ, ಕಾಲೇಜಿನ ಪ್ರಿನ್ಸಿಪಾಲ್ ರಮೇಶ, ಪ್ರೌಢ ಶಾಲಾ ಮುಖ್ಯಶಿಕ್ಷಕ ಸೀತಾರಾಮ ಎಂ.ಕೆ, ಕನ್ನಡ ಸಾಹಿತ್ಯ ಪರಿಷತ್ ಗೌರ ಕಾರ್ಯದರ್ಶಿ ತೇಜಸ್ವಿ ಕಡಪಳ, ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕಿ ಚಂದ್ರಮತಿ ಉಪಸ್ಥಿತರಿದ್ದರು.

ಸ್ಪರ್ಧಾಸಮಿತಿ ಸಂಚಾಲಕ ಹನುಮಂತಪ್ಪ .ಜಿ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಕೇಶವ ಸಿ.ಎ ಪ್ರಾಸ್ತಾವಿಕ ಮಾತನಾಡಿದರು. ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಾನಾ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror