ಸುಳ್ಯದ ಶಾಂತಿನಗರ ಎಂಬಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿ ಬೆಳಗ್ಗೆ ಹೋಗುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಗುಂಡು ತಾಗಿರುವ ವ್ಯಕ್ತಿ ಸಂಪತ್ ಕುಮಾರ್ (35) ಎಂದು ತಿಳಿದುಬಂದಿದ್ದು ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸ್ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಸಂಪತ್ ಎಂಬವರು ಕೊಡಗು ಸಂಪಾಜೆಯ ಪ್ರಭಾವಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…