ಸುಳ್ಯದ ಶಾಂತಿನಗರ ಎಂಬಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿ ಬೆಳಗ್ಗೆ ಹೋಗುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಗುಂಡು ತಾಗಿರುವ ವ್ಯಕ್ತಿ ಸಂಪತ್ ಕುಮಾರ್ (35) ಎಂದು ತಿಳಿದುಬಂದಿದ್ದು ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸ್ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಸಂಪತ್ ಎಂಬವರು ಕೊಡಗು ಸಂಪಾಜೆಯ ಪ್ರಭಾವಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…