ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

December 10, 2023
7:31 PM
ಕಲ್ಮಡದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿವಿಧ ನಿರ್ಣಯಗಳನ್ನು ಮಂಡಿಸಲಾಯಿತು.

ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.

ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.

Photo Credit : ಶಿವಸುಬ್ರಹ್ಮಣ್ಯ ಕಲ್ಮಡ್ಕ

ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.

ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ,  ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ,  ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror