ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.
ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.
ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.
ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ, ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ, ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…