ಸುದ್ದಿಗಳು

ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು | ಸುಳ್ಯ ತಾಲೂಕು ವಿಪ್ರ ಸಮಾವೇಶದ ಆಶಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಖ್ಯಾ ದೃಷ್ಟಿಯಿಂದ ಕಡಿಮೆಯಿದ್ದರೂ ವಿಪ್ರರನ್ನು ಕಡೆಗಣಿಸಬಾರದು ಎಂದು ಸುಳ್ಯ ತಾಲೂಕು ವಿಪ್ರ ಸಮಾವೇಶದಲ್ಲಿ ಸರ್ಕಾರವನ್ನು ಆಗ್ರಹಿಸಲಾಗಿದೆ.

Advertisement

ಕಲ್ಮಡ್ಕದ ಶ್ರೀ ರಾಮ ಮಂದಿರ ಸಭಾಭವನದಲ್ಲಿ ಭಾನುವಾರ ನಡೆದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.ಸಮಾರೋಪ ಸಮಾರಂಭದಲ್ಲಿ ಅಖಿಲ ಕರ್ನಾಟಕ ವಿಪ್ರ ಮಹಾಸಭಾದ ಅಧ್ಯಕ್ಷ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಉಪಸ್ಥಿತರಿದ್ದರು.

Photo Credit : ಶಿವಸುಬ್ರಹ್ಮಣ್ಯ ಕಲ್ಮಡ್ಕ

ದೇಶದ ಅಭಿವೃದ್ಧಿಗೆ ವಿಪ್ರ ಸಮಾಜದ ಕೊಡುಗೆ ಅಪಾರ. ವಿಪ್ರ ಪ್ರತಿಭೆಗಳನ್ನು ಕಡೆಗಣಿಸುವುದರಿಂದ ದೇಶಕ್ಕೆ ನಷ್ಟವಾಗುತ್ತದೆ. ಆದ್ದರಿಂದ ವಿಪ್ರ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದೂ ಒತ್ತಾಯಿಸಲಾಯಿತು. ವಿಪ್ರರು ಮೀಸಲಾತಿ ಕೇಳಲಾರರು. ಆದರೆ ಅವರ ಪ್ರತಿಭೆಗೆ ಅನುಗುಣವಾಗಿ ಅವರ ಬಯಕೆಯಂತೆ ಅವಕಾಶಗಳು ದೊರಬೇಕು ಎಂದು ಸಮಾವೇಶವು ಅಭಿಪ್ರಾಯಪಟ್ಟಿತು.
ಸುಳ್ಯ ತಾಲೂಕು ಮಟ್ಟದಲ್ಲಿ ವಿಪ್ರ ಯುವ ವೇದಿಕೆ ಮತ್ತು ವಿಪ್ರ ಮಹಿಳಾ ವೇದಿಕೆ ಆರಂಭಿಸಲು ಇದೇ ಸಂದರ್ಭದಲ್ಲಿ ನಿರ್ಧರಿಸಲಾಯಿತು.

ಎರಡೂ ವೇದಿಕೆಯ ಸಂಚಾಲಕರನ್ನಾಗಿ ಗುರುರಾಜ ಕಲ್ಕಾಡು ಮರ್ಕಂಜ, ಸಾಯಿನಾರಾಯಣ ಕಲ್ಮಡ್ಕ,  ಅಖಿಲ್ ಸೋಮಯಾಜಿ, ಡಾ| ವೀಣಾ, ಮಮತಾ ಮೂಡಿತ್ತಾಯ,  ಪ್ರಸನ್ನಾ ಭಾರಧ್ವಜ ಅವರನ್ನು ನೇಮಿಸಲಾಯಿತು. ವಿಪ್ರ ಸಮಾಜದ ವಿವಿಧ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 minute ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

57 minutes ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

23 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

24 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

24 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

1 day ago